ಗರ,ದರ,ಸರ,ಕರ ಈ ಪದಗಳನ್ನು ಉಪಯೋಗಿಸಿ ಸಮುದ್ರ ಮಥನವನ್ನು ಕುರಿತು ನಿಮಗಿಷ್ಟವಾದ ಛಂದಸ್ಸಿನಲ್ಲಿ ಪದ್ಯ ಬರೆಯಿರಿ
(ಶ್ರೀ ಕೃಷ್ಣರಾಜ ಅವರು ಶತಾವಧಾನದಲ್ಲಿ ನೀಡಿದ ದತ್ತಪದಿ)
ಈ ಬಾರಿಯ ಸಾಮೂಹಿಕ ಕಥಾರಚನೆಯ ವಿಷಯ :: “ರಾಮ, ಲಕ್ಷ್ಮಣ ಹಾಗೂ ಸೀತೆಯರು ವನವಾಸಕ್ಕೆಂದು ಅಯೋಧ್ಯೆಯಿಂದ ತೆರಳಿದ್ದು“. ವನವಾಸಕ್ಕೆ ತೆರಳುವುದೇ ಹೌದೆಂದು ರಾಮ ನಿರ್ಧಾರ ಮಾಡಿದ್ದಾನೆ ಎಂಬಲ್ಲಿಂದ ತೆಗೆದುಕೊಂಡು, ಅಯೋಧ್ಯೆಯನ್ನು ದಾಟುವ ವರೆವಿಗು ಕಥೆಯನ್ನು ತೆಗೆದುಕೊಂಡೊಯ್ಯೋಣ.
ಈ ಕಥೆಯಲ್ಲಿ, ಲಕ್ಷ್ಮಣ ಹಾಗೂ ಸೀತೆಯರು ತಾವೂ ಬರಬೇಕೆಂದು ಹಠ ಮಾಡಿದ್ದು, ಅವರನ್ನು ನಿರಾಕರಿಸುವುದಕ್ಕೆ ರಾಮ ಮಾಡಿದ ಪ್ರಯತ್ನ, ಹೋಗಬೇಡ ಎಂದು ಕೆಲವರು ದುಂಬಾಲು ಬಿದ್ದದ್ದು, ಅಯೋಧ್ಯೆಯ ಪ್ರಜೆಗಳು ಹಿಂಬಾಲಿಸಿದ್ದು, ಎಲ್ಲವನ್ನು ವಿಷಯಕ್ಕೆಂದು ತೆಗೆದುಕೊಳ್ಳಬಹುದು.
ಎಂದಿನಂತೆ, ನಿಧಾನವಾಗಿ ಅನೇಕ ವರ್ಣನೆಗಳಿಗೆ ಅವಕಾಶವಿಟ್ಟುಕೊಂಡು ಬರೆಯೋಣ. ಯಾವ. ಛಂದಸ್ಸು ಬೇಕಾದರೂ ಆಯ್ದುಕೊಳ್ಳಬಹುದು.
[ಈ ವಿಷಯಕ್ಕೆ ಸಾಮೂಹಿಕವಾಗಿ ನ್ಯಾಯ ಒದಗಿಸಬೇಕೆಂದರೆ, ೨ ವಾರಗಳಷ್ಟಾದರೂ ಬೇಕಾದೀತು - ಆದುದರಿಂದ ಈ ಕಂತಿಗೆ ಪದ್ಯ ಸಪ್ತಾಹದ ಬದಲು ಪದ್ಯ ಪಕ್ಷ ಎಂದಾದರೂ ಹೇಳಬಹುದು. ಕಥೆ ಹೇಗೆ ಬೆಳೆಯುತ್ತದೆ ಎಂದು ನೋಡೋಣ.]
ಮತ್ತೇಭ ಅಥವಾ ಶಾರ್ದೂಲ ವಿಕ್ರೀಡಿತ ಛಂದಸ್ಸುಗಳ, ಕೊನೆಯ ಸಾಲಿನ ಎರಡನೆ ಭಾಗ ಇಂತಿದೆ :: ‘ಚೆಲ್ವಾಯ್ತು ಚಂದ್ರೋದಯಂ‘
ಇಡಿಯ ಪದ್ಯವನ್ನು ನಿಮ್ಮ ಕಲ್ಪನೆಯಂತೆ ಪೂರಣಿಸಿರಿ.
[ಇದು ಸಮಸ್ಯಾಪೂರಣದ ಒಂದು ಪ್ರಬೇಧವೇ ಆಗಿದೆ. ಆದರೆ, ಇಲ್ಲಿ ಸಮಸ್ಯೆಯಿಲ್ಲ. ಕೇವಲ ಕಲ್ಪನೆಗೆ ಸಾಕಗುವಷ್ಟು ಸೂಚನೆಯಷ್ಟೇ ಇದೆ. ಹಾಗಾಗಿ ಅನೇಕ ವಿಧವಾದ ಕಲ್ಪನೆಗಳಿಗೆ ಅವಕಾಶವಿದೆ. ನಿಮ್ಮ ಸರ್ಜನತೆಯನ್ನು ಹುರಿದುಂಬಿಸಿರಿ ಹಾಗೂ ಪದ್ಯಾಮೃತವನ್ನು ಕುಡಿಸಿರಿ. ]
ಸದ್ಯದ ಶತಾವಧಾನದಲ್ಲಿ ಶ್ರೀ ಬಿ. ಆರ್. ಪ್ರಭಾಕರ್ ರವರು ನೀಡಿದ ಸ್ರಗ್ವಿಣೀ ಛಂದಸ್ಸಿನ ಈ ಸಮಸ್ಯೆಗೆ ನಿಮ್ಮ ಪೂರಣಗಳನ್ನು ನೀಡಿರಿ :: ಸಾಗರಂ ಗರ್ತದೊಳ್ ಜಾನುಮಾತ್ರಂ ಗಡಾ [ಸಾಗರವು ಆಳದಲ್ಲಿ ಮೊಳಕಾಲಿನಷ್ಟೇ ಎಂಬ ಭಾವ]
ಎಲ್ಲರೂ ಕೂಡಿ ಸೀತಾ ಕಲ್ಯಾಣದ ಕಥೆಯನ್ನು ಬೆಳೆಸೋಣವೇ? ವಿಶ್ವಾಮಿತ್ರರು ರಾಮ ಲಕ್ಷ್ಮಣರನ್ನು ಕರೆದುಕೊಂಡು ಮಿಥಿಲೆಯೆಡೆಗೆ ಬರುತ್ತಿದ್ದಾರೆ. ಅಹಲ್ಯಾ ಪ್ರಕರಣ ಮುಗಿದಿದೆ. ಇಲ್ಲಿಂದ ಶುರುಮಾಡಿ ಸೀತಾ-ರಾಮರ ಕಲ್ಯಾಣದವರೆವಿಗೂ ಕಥೆಯನ್ನು ಬೆಳೆಸೋಣ. ನಿಧಾನವಾಗಿ ಅನೇಕ ವರ್ಣನೆಗಳಿಗೆ ಅವಕಾಶವಿಟ್ಟುಕೊಂಡು ಬರೆಯೋಣ – ಅಂದರೆ ನಾಗಲೋಟದಲ್ಲಿ ಕಥೆಯನ್ನು ಓಡಿಸುವುದು ಬೇಡ. ಯಾವ ಛಂದಸ್ಸು ಬೇಕಾದರೂ ಆಯ್ದುಕೊಳ್ಳಬಹುದು. ವರ್ಣನೆಗಳಿಗೆ ಅನೇಕ ಅವಕಾಶಗಳಿವೆ. ಉದಾರವಾಗಿ ಬಳಸಿಕೊಳ್ಳಿ.
ಕುಮಾರವ್ಯಾಸನ ಈ ಪದ್ಯದ ವಿಡಂಬನ (parody) ಮಾಡಿರಿ. ಛಂದಸ್ಸು ನಿಮ್ಮ ಆಯ್ಕೆಯದು. ಹಲಗೆಬಳಪವ ಪಿಡಿಯದೊಂದ ಗ್ಗಳಿಕೆ ಪದವಿಟ್ಟಳುಪದೊಂದ ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ| ಬಳಸಿಬರೆಯಲು ಕಂಠಪತ್ರದ ವುಲುಹುಗೆಡದಗ್ಗಳಿಕೆಯೆಂಬೀ ಬಲುಹು ಗದುಗಿನ ವೀರನಾರಾಯಣನ ಕಿಂಕರಗೆ|| This is what I got when I looked up ‘PARODY’ in Monier Williams dictionary: पशुगायत्री A parody of the sacred गायत्री whispered into the ear of a sacrificial animal:पशु-पाशाय विद्महे शिरश्-छेदाय धीमहि तन् [...]
ಈ ಸಮಸ್ಯೆಯ ಉಳಿದ ಸಾಲುಗಳನ್ನು ಒದಗಿಸಿ ಸಮಸ್ಯೆಯನ್ನು ಪರಿಹರಿಸಿ ಸಂಸ್ಕೃತದಲ್ಲಿ दश भवन्ति मनोभवसायकाः (द्रुतविलम्बिता) ಕನ್ನಡದಲ್ಲಿ ಪೂರಣ ಮಾಡಬಯಸುವವರಿಗೆ ಮನಸಿಜನ ಬಳಿ ಹತ್ತುಬಾಣಗಳಿರುವುದೇ ನಿಜವೈ ಅಥವಾ ಮನ್ಮಥನ ಬಳಿ ಹತ್ತುಬಾಣಗಳಿರುವುದೇ ನಿಜವೈ (ಭಾಮಿನೀ ಷಟ್ಪದಿ)




