Apr 292013
 

ಈ ಬಾರಿಯ ಸಾಮೂಹಿಕ ಕಥಾರಚನೆಯ ವಿಷಯ :: “ರಾಮ, ಲಕ್ಷ್ಮಣ ಹಾಗೂ ಸೀತೆಯರು ವನವಾಸಕ್ಕೆಂದು ಅಯೋಧ್ಯೆಯಿಂದ ತೆರಳಿದ್ದು“. ವನವಾಸಕ್ಕೆ ತೆರಳುವುದೇ ಹೌದೆಂದು ರಾಮ ನಿರ್ಧಾರ ಮಾಡಿದ್ದಾನೆ ಎಂಬಲ್ಲಿಂದ ತೆಗೆದುಕೊಂಡು, ಅಯೋಧ್ಯೆಯನ್ನು ದಾಟುವ ವರೆವಿಗು ಕಥೆಯನ್ನು ತೆಗೆದುಕೊಂಡೊಯ್ಯೋಣ.

ಈ ಕಥೆಯಲ್ಲಿ, ಲಕ್ಷ್ಮಣ ಹಾಗೂ ಸೀತೆಯರು ತಾವೂ ಬರಬೇಕೆಂದು ಹಠ ಮಾಡಿದ್ದು, ಅವರನ್ನು ನಿರಾಕರಿಸುವುದಕ್ಕೆ ರಾಮ ಮಾಡಿದ ಪ್ರಯತ್ನ, ಹೋಗಬೇಡ ಎಂದು ಕೆಲವರು ದುಂಬಾಲು ಬಿದ್ದದ್ದು, ಅಯೋಧ್ಯೆಯ ಪ್ರಜೆಗಳು ಹಿಂಬಾಲಿಸಿದ್ದು, ಎಲ್ಲವನ್ನು ವಿಷಯಕ್ಕೆಂದು ತೆಗೆದುಕೊಳ್ಳಬಹುದು.

ಎಂದಿನಂತೆ, ನಿಧಾನವಾಗಿ ಅನೇಕ ವರ್ಣನೆಗಳಿಗೆ ಅವಕಾಶವಿಟ್ಟುಕೊಂಡು ಬರೆಯೋಣ. ಯಾವ. ಛಂದಸ್ಸು ಬೇಕಾದರೂ ಆಯ್ದುಕೊಳ್ಳಬಹುದು.

[ಈ ವಿಷಯಕ್ಕೆ  ಸಾಮೂಹಿಕವಾಗಿ ನ್ಯಾಯ ಒದಗಿಸಬೇಕೆಂದರೆ, ೨ ವಾರಗಳಷ್ಟಾದರೂ ಬೇಕಾದೀತು – ಆದುದರಿಂದ ಈ ಕಂತಿಗೆ ಪದ್ಯ ಸಪ್ತಾಹದ ಬದಲು ಪದ್ಯ ಪಕ್ಷ ಎಂದಾದರೂ ಹೇಳಬಹುದು. ಕಥೆ ಹೇಗೆ ಬೆಳೆಯುತ್ತದೆ ಎಂದು ನೋಡೋಣ.]

Apr 222013
 

ಮತ್ತೇಭ ಅಥವಾ ಶಾರ್ದೂಲ ವಿಕ್ರೀಡಿತ ಛಂದಸ್ಸುಗಳ, ಕೊನೆಯ ಸಾಲಿನ ಎರಡನೆ ಭಾಗ ಇಂತಿದೆ ::‌ ‘ಚೆಲ್ವಾಯ್ತು ಚಂದ್ರೋದಯಂ

ಇಡಿಯ ಪದ್ಯವನ್ನು ನಿಮ್ಮ ಕಲ್ಪನೆಯಂತೆ ಪೂರಣಿಸಿರಿ.

[ಇದು ಸಮಸ್ಯಾಪೂರಣದ ಒಂದು ಪ್ರಬೇಧವೇ ಆಗಿದೆ. ಆದರೆ, ಇಲ್ಲಿ ಸಮಸ್ಯೆಯಿಲ್ಲ. ಕೇವಲ ಕಲ್ಪನೆಗೆ ಸಾಕಗುವಷ್ಟು ಸೂಚನೆಯಷ್ಟೇ ಇದೆ. ಹಾಗಾಗಿ ಅನೇಕ ವಿಧವಾದ ಕಲ್ಪನೆಗಳಿಗೆ ಅವಕಾಶವಿದೆ. ನಿಮ್ಮ ಸರ್ಜನತೆಯನ್ನು ಹುರಿದುಂಬಿಸಿರಿ ಹಾಗೂ ಪದ್ಯಾಮೃತವನ್ನು ಕುಡಿಸಿರಿ. ]

Apr 132013
 
ಸಮುದ್ರ ಮತ್ತು ಸೂರ್ಯ

ಸಮುದ್ರ ಮತ್ತು ಸೂರ್ಯ
(ಚಿತ್ರ ಕೃಪೆ : ಅಂತರ್ಜಾಲ)

 

ಈ ಚಿತ್ರಕ್ಕೆ ಹೊಂದುವಂತೆ ನಿಮಗಿಷ್ಟವಾದ ಛಂದಸ್ಸುಗಳಲ್ಲಿ ಪದ್ಯಗಳನ್ನು ಬರೆಯಿರಿ

Apr 072013
 

ಸದ್ಯದ ಶತಾವಧಾನದಲ್ಲಿ ಶ್ರೀ ಬಿ. ಆರ್. ಪ್ರಭಾಕರ್ ರವರು ನೀಡಿದ ಸ್ರಗ್ವಿಣೀ ಛಂದಸ್ಸಿನ ಈ ಸಮಸ್ಯೆಗೆ ನಿಮ್ಮ ಪೂರಣಗಳನ್ನು ನೀಡಿರಿ ::

ಸಾಗರಂ ಗರ್ತದೊಳ್ ಜಾನುಮಾತ್ರಂ ಗಡಾ

[ಸಾಗರವು ಆಳದಲ್ಲಿ ಮೊಳಕಾಲಿನಷ್ಟೇ ಎಂಬ ಭಾವ]