Jul 242011
 

ರೆಕ್ಕೆ ಬಂದುದು ಹಿಂದು ಧರ್ಮಕೆ
ಹಕ್ಕನಾಗಿರೆ ಮೊದಲ ರಾಜನು
ಬುಕ್ಕ ಕಂಪರು ಬೆನ್ನಿನನುಜರು ಸೊಂಟಕಟ್ಟಿರಲು ||
ಉಕ್ಕಿಸುತಲುತ್ಸಾಹವಿವರಲಿ
ರೊಕ್ಕವನು ಹೊಂದಿಸುತ ರಾಜ್ಯದ
ಟೆಕ್ಕೆಯನು ಹಾರಿಸಲು ಮಾಧವ ಸಾಯನರ ದೀಕ್ಷೆ || ೧ ||

ಪರುಠವಣೆಯ ಭರಾಟೆ ಸಾಗುತೆ
ಹರಡಿದವು ರಾಜ್ಯಾಂಗ ಗಡಿಗಳ –
ವರಿಗಳಾ ಮಟ್ಟಣಿಸಿ ಜಯದಿಂ ರಾಜ್ಯ ಬೆಳೆದೊರೆದು ||
ವರುಷವೆರಡೂವರೆಶತಂಗಳ
ವರೆಗು ಮೆರುಗಿದ ವಿಜಯನಗರವ
ಸಿರಿಯ ಸಂಗಮ, ಸಾಳುವರು, ತುಳುರಾಯರಾಳಿದರು || ೨ ||

ವಿಜಯನಗರದ ರಾಜಕುಲ ಸಾ –
ಮಜನು ಕೃಷ್ಣs ದೇವರಾಯನು
ಸುಜನ ಸುಚರಿತ್ರರನು ಮೆರೆಸಿದ ಸಕಲ ಸದ್ಗುಣನು ||
ಅಜರವಾಗಿಸಿತವನ ಹೆಸರನು
ಸುಜಲ ಯೋಜನೆ ಕಾರ್ಯಚರಣೆ ಖ –
ನಿಜದಿ ಬೆಳೆದಾ ಕಲೆಗಳೂ ಸಾಹಿತ್ಯ ಸಂಪದವು || ೩ ||

ಕಾಲ ಕ್ರಮದಲಿ ರಾಜ್ಯ ಮದದಿಂ
ಕೇಳರಿಯದಾ ಭೋಗ ಸುಖದಿಂ –
ದಾಳುವಾ ಶೌರ್ಯವನು ಮತ್ತೊಗ್ಗಟ್ಟಣೆಯ ಮರೆತು ||
ಕಾಲು ತೊಡರುವ ಮುಸಲ ರಾಜರ
ಹೇಳಹೆಸರಿಲ್ಲದವೊಲಡಗದೆ
ಶೂಲಕಿಟ್ಟರು ರಾಜ್ಯಸಿರಿಯನು ಮುಗಿಸುತಂಕವನು || ೪ ||

– ರಾಮಚಂದ್ರ

 Leave a Reply

You may use these HTML tags and attributes: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

(required)

(required)